ಬೆಂಗಳೂರು : ಜಾತಿಗಣತಿ ವರದಿ ಬಗ್ಗೆ ಚರ್ಚಿಸಲು ರಾಜ್ಯ ಸರಕಾರ ಕೂಡಲೇ ಸರ್ವಪಕ್ಷ ಸಭೆ ಕರೆಯಬೇಕು. ಹಾಗೆಯೇ ಎಲ್ಲಾ ಸಮುದಾಯಗಳ ಸ್ವಾಮೀಜಿಗಳು, ಮುಖಂಡರು, ಬುದ್ದಿಜೀವಿಗಳನ್ನು ಆಹ್ವಾನಿಸಿ ಸಮಾಲೋಚನೆ ನಡೆಸಿ ಸರ್ವಸಮ್ಮತ ಪರಿಹಾರ ಕಂಡುಕೊಳ್ಳಬೇಕು ಎಂದು ಯುವ ಜನತಾದಳ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಒತ್ತಾಯಿಸಿದರು. ಜೆಡಿಎಸ್ ರಾಜ್ಯ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘‘ಜಾತಿಗಣತಿಯನ್ನು ಜೆಡಿಎಸ್ ಯಾವುದೇ ಕಾರಣಕ್ಕೂ ವಿರೋಧಿಸುತ್ತಿಲ್ಲ. ಸಮೀಕ್ಷೆ ಕ್ರಮಬದ್ಧವಾಗಿಲ್ಲ, ಸೋರಿಕೆಯಾಗಿರುವ ಅಂಕಿಅಂಶಗಳ ಸತ್ಯಾಸತ್ಯತೆ ಬಗ್ಗೆಯಷ್ಟೇ ಪ್ರಶ್ನೆ ಮಾಡಿದ್ದೇವೆ. ಸಮೀಕ್ಷರು ಯಾರ ಮನೆಗೆ ಹೋಗಿದ್ದಾರೆ, ಯಾವ ಮಾನದಂಡದಡಿ ಸಮೀಕ್ಷೆ ನಡೆಸಿದ್ದಾರೆ ಎಂಬ ಸರಿಯಾದ ಮಾಹಿತಿ ಇಲ್ಲ. ಹಾಗಾಗಿ ಇಡೀ ವರದಿಯನ್ನು ಪುನರ್ ಪರಿಶೀಲಿಸಬೇಕು ’ ಎಂದು ಆಗ್ರಹಿಸಿದರು.
ಬೆಂಗಳೂರು : ಜಾತಿಗಣತಿ ವರದಿ ಬಗ್ಗೆ ಚರ್ಚಿಸಲು ರಾಜ್ಯ ಸರಕಾರ ಕೂಡಲೇ ಸರ್ವಪಕ್ಷ ಸಭೆ ಕರೆಯಬೇಕು. ಹಾಗೆಯೇ ಎಲ್ಲಾ ಸಮುದಾಯಗಳ ಸ್ವಾಮೀಜಿಗಳು, ಮುಖಂಡರು, ಬುದ್ದಿಜೀವಿಗಳನ್ನು ಆಹ್ವಾನಿಸಿ ಸಮಾಲೋಚನೆ ನಡೆಸಿ ಸರ್ವಸಮ್ಮತ ಪರಿಹಾರ ಕಂಡುಕೊಳ್ಳಬೇಕು ಎಂದು ಯುವ ಜನತಾದಳ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಒತ್ತಾಯಿಸಿದರು. ಜೆಡಿಎಸ್ ರಾಜ್ಯ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘‘ಜಾತಿಗಣತಿಯನ್ನು ಜೆಡಿಎಸ್ ಯಾವುದೇ ಕಾರಣಕ್ಕೂ ವಿರೋಧಿಸುತ್ತಿಲ್ಲ. ಸಮೀಕ್ಷೆ ಕ್ರಮಬದ್ಧವಾಗಿಲ್ಲ, ಸೋರಿಕೆಯಾಗಿರುವ ಅಂಕಿಅಂಶಗಳ ಸತ್ಯಾಸತ್ಯತೆ ಬಗ್ಗೆಯಷ್ಟೇ ಪ್ರಶ್ನೆ ಮಾಡಿದ್ದೇವೆ. ಸಮೀಕ್ಷರು ಯಾರ ಮನೆಗೆ ಹೋಗಿದ್ದಾರೆ, ಯಾವ ಮಾನದಂಡದಡಿ ಸಮೀಕ್ಷೆ ನಡೆಸಿದ್ದಾರೆ ಎಂಬ ಸರಿಯಾದ ಮಾಹಿತಿ ಇಲ್ಲ. ಹಾಗಾಗಿ ಇಡೀ ವರದಿಯನ್ನು ಪುನರ್ ಪರಿಶೀಲಿಸಬೇಕು ’ ಎಂದು ಆಗ್ರಹಿಸಿದರು.
إرسال تعليق