ಹುಬ್ಬಳ್ಳಿ ಪ್ರಕರಣ: ಅಂತ್ಯ ಸಂಸ್ಕಾರಕ್ಕೆ ಅನುಮತಿ


ಹುಬ್ಬಳ್ಳಿಯಲ್ಲಿ 5 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಬಳಿಕ ಹತ್ಯೆಗೈದಿದ್ದ ಬಿಹಾರ ಮೂಲದ ವಲಸೆ ಕಾರ್ಮಿಕ ರಿತೇಶ್ ಕುಮಾರ್‌ನನ್ನು ಎನ್‌ಕೌಂಟ‌ರ್ ಮಾಡಲಾಗಿತ್ತು. ಇದೀಗ ಈತನ ಮೃತದೇಹದ ಅಂತ್ಯ ಸಂಸ್ಕಾರ ಮಾಡಲು ಹೈಕೋರ್ಟ್ ಅನುಮತಿ ನೀಡಿದೆ.

ಈತನ ಮೃತದೇಹ ಇಡೀ ಪ್ರಕರಣಕ್ಕೆ ಪ್ರಮುಖ ಸಾಕ್ಷಿಯಾಗಿದ್ದು, ಮೃತದೇಹ ದಹನ ಮಾಡದಂತೆ ಮನವಿ ಮಾಡಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ NB. ಅಂಜಾರಿಯಾ ಅವರ ನೇತೃತ್ವದ ವಿಭಾಗೀಯ ಪೀಠ ಈ ಆದೇಶ ನೀಡಿದೆ.



Post a Comment

0 Comments