ಡಿಸಿಎಂ ಡಿಕೆ ಶಿವಕುಮಾರ್ ಇಂದು ತಮ್ಮ ಅಭಿಮಾನಿಗಳ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ಬಳಿ ವಿಶೇಷ ಮನವಿ ಮಾಡಿದ್ದಾರೆ. ನಾಳೆ ಡಿಕೆಶಿ ಅವರ ಹುಟ್ಟು ಹಬ್ಬ. ಈ ಹಿನ್ನಲೆ ಅವರು, ನಮ್ಮ ದೇಶದ ಯೋಧರು ಪ್ರಾಣ ಪಣಕ್ಕಿಟ್ಟು ಹೋರಾಡುತ್ತಿರುವ ಸಂದರ್ಭವಿದು. ಹೀಗಾಗಿ ನಾಳೆ ಯಾರೂ ನನ್ನ ಜನ್ಮದಿನ ಆಚರಣೆ ಮಾಡುವುದು ಬೇಡ ಎಂದು ಸ್ನೇಹಿತರು, ಹಿತೈಷಿಗಳು, ಪಕ್ಷದ ಮುಖಂಡರು, ಕಾರ್ಯಕರ್ತರ ಬಳಿ ಮನವಿ ಮಾಡಿದ್ದಾರೆ. ನಾಳೆ ನನ್ನನ್ನು ಭೇಟಿಯಾಗಲು ಮನೆ ಬಳಿ ಹಾಗೂ ಕಛೇರಿ ಬಳಿ ಬರಬೇಡಿ ಎಂದು ತಿಳಿಸಿದ್ದಾರೆ.
0 تعليقات