ಬೆಂಗಳೂರಿನಲ್ಲಿ ಕಟ್ಟೆಚ್ಚರಕ್ಕೆ ಪೊಲೀಸ್ ಕಮಿಷನ‌ರ್ ಸೂಚನೆ


IPL-18ರ ಫೈನಲ್ ಪಂದ್ಯದಲ್ಲಿ ಇಂದು RCB ವಿರುದ್ಧ ಪಂಜಾಬ್ ಕಿಂಗ್ಸ್ ಸೆಣಸಲಿವೆ. RCB ಗೆಲುವಿಗಾಗಿ ಕರ್ನಾಟಕದಾದ್ಯಂತ ಅಭಿಮಾನಿಗಳ ಹಾರೈಕೆ, ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ. ಇದೇ ಸಂದರ್ಭದಲ್ಲಿ, ಮುಂಜಾಗ್ರತಾ ಕ್ರಮವಾಗಿ ಬೆಂಗಳೂರಿನಲ್ಲಿ ಪೊಲೀಸರಿಗೆ ಕಟ್ಟೆಚ್ಚರ ವಹಿಸಲು ಸೂಚನೆ ನೀಡಲಾಗಿದೆ. ಸಂಭ್ರಮಾಚರಣೆ ನೆಪದಲ್ಲಿ ಯಾರೂ ಅತಿರೇಕದ ವರ್ತನೆ ತೋರದಂತೆ, ಒಂದು ವೇಳೆ ತೋರಿದರೆ ಕ್ರಮ ಕೈಗೊಳ್ಳುವಂತೆ ಮುನ್ನೆಚ್ಚರಿಕೆ ವಹಿಸಲು ಪೊಲೀಸ್ ಕಮಿಷನ‌ರ್ ದಯಾನಂದ್‌ ಸೂಚನೆ ನೀಡಿದ್ದಾರೆ.


Post a Comment

0 Comments